26.1 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya
error: Content is protected !!