26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಸರ್ಕಾರಿ ಜಾಗದಲ್ಲಿ ಅನಧಿಕೃತ ಕಟ್ಟಡ ತೆರವಿಗೆ ತಹಶೀಲ್ದಾರ್ ಆದೇಶ; ಕಟ್ಟಡಕ್ಕೆ ನೋಟೀಸ್ ಅಂಟಿಸಿದ ಅಧಿಕಾರಿಗಳು

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ  ಪದ್ಮುಂಜ ಸಹಕಾರಿ ಸಂಘ: ಮಹಾಸಭೆಯಲ್ಲಿ ಶೇ. 12 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ  ರಕ್ಷಿತ್ ಪಣೆಕ್ಕರ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!