29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ ಇದರ ಡೀನ್ ಡಾ. ಸೌಮ್ಯ ಅವರು ಕಾರ್ಯಾಗಾರವನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು. ಸಮಯ ಪಾಲನೆ, ಶಿಸ್ತು ಮತ್ತು ಹೊಸತನದ ಮನೋಭಾವ ಸದಾ ಇರಲಿ ಎಂದು ಶಿಬಿರಾರ್ಥಿಗಳಿಗೆ ಅವರು ಆಶಯ ನುಡಿಗಳನ್ನು ಹೇಳಿದರು.

ಅಂತರಾಷ್ಟ್ರೀಯ ಪ್ರಮಾಣೀಕೃತ ಮೇಕಪ್ ಆರ್ಟಿಸ್ಟ್, ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಮೇಕಪ್ ಎಜುಕೇಟರ್ ಆಗಿರುವ ಹಾಸನದ ಸೋಮು ಹಾಸನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತಮ್ಮ ದೀರ್ಘ ವೃತ್ತಿ ಅನುಭವದ ಮಾತುಗಳನ್ನು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತರಬೇತಿ ಪಡೆದ ನಂತರ ತಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಬ್ಯಾಂಕ್ ಸಾಲದ ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರಾದ ಮಾಧವಿ. ಎಂ. ರೈ ಹಾಗೂ ಆಶಾ ಸೋಮು (ಹಾಸನ) ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸೋಮು ಹಾಸನ್, ಅವರನ್ನು ಗೌರವಿಸಲಾಯಿತು.

ಕುಮಾರಿ ಜಲಜಾಕ್ಷಿ ಮತ್ತು ಶ್ರಾವಣಿ ತಂಡ ಪ್ರಾರ್ಥನಾ ಹಾಡಿದರು. ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಸಂಸ್ಥೆಯ ಸಹೋದ್ಯೋಗಿಗಳಾದ ರಶ್ಮಿ, ಪ್ರವೀಣ್ ‌ಕುಮಾರ್, ಕಾಶ್ಮೀರ ಡಿ ಸೋಜಾ, ಸುರೇಶ, ಸಹಕರಿಸಿದ್ದರು.

Related posts

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!