July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ ಇದರ ಡೀನ್ ಡಾ. ಸೌಮ್ಯ ಅವರು ಕಾರ್ಯಾಗಾರವನ್ನು ಅಧಿಕೃತವಾಗಿ ಉದ್ಘಾಟಿಸಿ ಮಾತನಾಡಿದರು. ಸಮಯ ಪಾಲನೆ, ಶಿಸ್ತು ಮತ್ತು ಹೊಸತನದ ಮನೋಭಾವ ಸದಾ ಇರಲಿ ಎಂದು ಶಿಬಿರಾರ್ಥಿಗಳಿಗೆ ಅವರು ಆಶಯ ನುಡಿಗಳನ್ನು ಹೇಳಿದರು.

ಅಂತರಾಷ್ಟ್ರೀಯ ಪ್ರಮಾಣೀಕೃತ ಮೇಕಪ್ ಆರ್ಟಿಸ್ಟ್, ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಮೇಕಪ್ ಎಜುಕೇಟರ್ ಆಗಿರುವ ಹಾಸನದ ಸೋಮು ಹಾಸನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತಮ್ಮ ದೀರ್ಘ ವೃತ್ತಿ ಅನುಭವದ ಮಾತುಗಳನ್ನು ಶಿಬಿರಾರ್ಥಿಗಳೊಂದಿಗೆ ಹಂಚಿಕೊಂಡರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತರಬೇತಿ ಪಡೆದ ನಂತರ ತಮ್ಮ ವ್ಯವಹಾರವನ್ನು ಮುಂದಕ್ಕೆ ಕೊಂಡೊಯ್ಯಲು ಬ್ಯಾಂಕ್ ಸಾಲದ ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಅತಿಥಿ ಉಪನ್ಯಾಸಕರಾದ ಮಾಧವಿ. ಎಂ. ರೈ ಹಾಗೂ ಆಶಾ ಸೋಮು (ಹಾಸನ) ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಸೋಮು ಹಾಸನ್, ಅವರನ್ನು ಗೌರವಿಸಲಾಯಿತು.

ಕುಮಾರಿ ಜಲಜಾಕ್ಷಿ ಮತ್ತು ಶ್ರಾವಣಿ ತಂಡ ಪ್ರಾರ್ಥನಾ ಹಾಡಿದರು. ರುಡ್‌ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

ಸಂಸ್ಥೆಯ ಸಹೋದ್ಯೋಗಿಗಳಾದ ರಶ್ಮಿ, ಪ್ರವೀಣ್ ‌ಕುಮಾರ್, ಕಾಶ್ಮೀರ ಡಿ ಸೋಜಾ, ಸುರೇಶ, ಸಹಕರಿಸಿದ್ದರು.

Related posts

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ನಡ ಸ.ಹಿ.ಪ್ರಾ. ಶಾಲಾ ಶತಮಾನೋತ್ಸವ ಸಮಿತಿಯಿಂದ ಡಾ|| ಹೆಗ್ಗಡೆಯವರ ಭೇಟಿ

Suddi Udaya
error: Content is protected !!