29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 21: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ. ರಂದು ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಲಿದೆ.

ಸ್ತನದ ತಪಾಸಣೆ, ಗರ್ಭಾಶಯದ ತಪಾಸಣೆ, ಸ್ತ್ರೀರೋಗ ತಪಾಸಣೆ, ಬಂಜೆತನ ತಪಾಸಣೆ, ಗರ್ಭಕಂಠ ಮತ್ತು ಗರ್ಭಾಶಯದ ಕ್ಯಾನ್ಸರ್ ತಪಾಸಣೆ, ಮುಟ್ಟಿನ ಅಸ್ವಸ್ಥತೆಗಳು, ಸ್ತನದ ಕ್ಯಾನ್ಸರ್, ಮೂತ್ರನಾಳದ ಸೋಂಕು ತಪಾಸಣೆಗಳನ್ನು ನಡೆಸಲಾಗುವುದು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ, ಡಾ| ಪ್ರಿಯಾಂಕ ಜಯದೇವ್ ಇವರು ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ಉಚಿತ ತಪಾಸಣೆಯೊಂದಿಗೆ, ಉಚಿತ ಪ್ಯಾಪ್ ಸ್ಮಯರ್ ಪರೀಕ್ಷೆ, ಲ್ಯಾಬ್ ಪರೀಕ್ಷೆಗಳಲ್ಲಿ 25%, ರೇಡಿಯಾಲಜಿ ಸೇವೆಗಳಲ್ಲಿ 25%, ಪ್ರಕ್ರಿಯೆಗಳಲ್ಲಿ 25%, ಔಷಧಿಗಳ ಮೇಲೆ 10%, ಒಳರೋಗಿ ಶುಲ್ಕಗಳಲ್ಲಿ 10%, ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ 25% ರಿಯಾಯತಿ ದೊರೆಯಲಿದೆ.

ಹೆಸರು ನೊಂದಾಯಿಸಿಕೊಳ್ಳಲು 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಲಾಯಿಲ ಜನಸ್ಪಂದನ ಸಭೆ

Suddi Udaya
error: Content is protected !!