29.4 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪ್ರಥಮವಾಗಿ ಆರಂಭ: ಸಿ.ಬಿ.ಜಿ ಘಟಕದ ಲೋಕಾರ್ಪಣೆ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!