July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!