July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ಸಮಾಜದ ಮೇಲೆ ಉಂಟುಮಾಡುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಾತಾವರಣ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶಗಳನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ತಿಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಪ್ರಮಾಣವಚನ ಸ್ವೀಕರಿಸಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿ ಸೌಮ್ಯ ನೀತಾ ಕೆ ಎಸ್ ಶ್ರೇಯಾಂಸ ಜೈನ್ , ಅಮಿತಾ ಪ್ರವೀಣ್ ,ಸಹನಾ ಶಾಲೆಯ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು.

Related posts

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya
error: Content is protected !!