29 C
ಪುತ್ತೂರು, ಬೆಳ್ತಂಗಡಿ
June 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ.

ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬರೇ ಇದ್ದವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮೃತರು ತಂದೆ ಮ್ಯಾಥ್ಯೂ ವಾಟೆಪ್ಪಿಳ್ಳಿಲ್, ತಾಯಿ ಲೀಲಾಮ್ಮ, ಪತ್ನಿ ಶೆರ್ಲಿ ಶಾಜಿ, ಮಕ್ಕಳಾದ ಅಲೆನ್ ಶಾಜಿ ಮತ್ತು ಆಲ್ಫಿ ಶಾಜಿ, ಸಹೋದರ ಸಹೋದರಿಯರಾದ ಸಿಲ್ವಿ, ರಾಯ್ ಮ್ಯಾಥ್ಯೂ, ಜೋಬಿ ಮ್ಯಾಥ್ಯೂ ಮತ್ತು ಸಜಿತ್ ಮ್ಯಾಥ್ಯೂ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ವಿದೇಶದಲ್ಲಿರುವ ಪುತ್ರ ಆಗಮಿಸಿದ ಬಳಿಕ ದಿನಾಂಕ ಜೂ.14 ರಂದು ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ವಿಧಿಗಳು ಮುಂಡಾಜೆ ಸೈಂಟ್ ಮೇರಿ ಚರ್ಚ್‌ನಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya
error: Content is protected !!