23.4 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಜೂ.12 ರಂದು ವಿಶ್ವ ತಂಬಾಕು ನಿರ್ಮೂಲನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರಾದ ಪ್ರಶಾಂತ್. ಕೆ. ಇವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತಂಬಾಕು ವಿರೋಧಿ ಸಂದೇಶಗಳನ್ನು ಸಾರಿದರು. “ತಂಬಾಕು ಮುಕ್ತ ಸಮಾಜ ನಿರ್ಮಿಸೋಣ” ಎಂಬ ಘೋಷಣೆಯೊಂದಿಗೆ ಎಲ್ಲರೂ ತಂಬಾಕು ಸೇವಿಸದಿರಲು ಹಾಗೂ ಇತರರನ್ನೂ ಪ್ರೇರೇಪಿಸಲು ಪ್ರತಿಜ್ಞೆ ಸ್ವೀಕರಿಸಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸಿದರು. ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆಯನ್ನು ತಿಳಿಸುವ ವಿವಿಧ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು.

Related posts

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya
error: Content is protected !!