29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನದ ಆಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಜೂ.12 ರಂದು ವಿಶ್ವ ತಂಬಾಕು ನಿರ್ಮೂಲನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರಾದ ಪ್ರಶಾಂತ್. ಕೆ. ಇವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತಂಬಾಕು ವಿರೋಧಿ ಸಂದೇಶಗಳನ್ನು ಸಾರಿದರು. “ತಂಬಾಕು ಮುಕ್ತ ಸಮಾಜ ನಿರ್ಮಿಸೋಣ” ಎಂಬ ಘೋಷಣೆಯೊಂದಿಗೆ ಎಲ್ಲರೂ ತಂಬಾಕು ಸೇವಿಸದಿರಲು ಹಾಗೂ ಇತರರನ್ನೂ ಪ್ರೇರೇಪಿಸಲು ಪ್ರತಿಜ್ಞೆ ಸ್ವೀಕರಿಸಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸಿದರು. ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆಯನ್ನು ತಿಳಿಸುವ ವಿವಿಧ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು.

Related posts

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!