ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಜೂ.12 ರಂದು ವಿಶ್ವ ತಂಬಾಕು ನಿರ್ಮೂಲನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕರಾದ ಪ್ರಶಾಂತ್. ಕೆ. ಇವರು ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು ತಂಬಾಕು ವಿರೋಧಿ ಸಂದೇಶಗಳನ್ನು ಸಾರಿದರು. “ತಂಬಾಕು ಮುಕ್ತ ಸಮಾಜ ನಿರ್ಮಿಸೋಣ” ಎಂಬ ಘೋಷಣೆಯೊಂದಿಗೆ ಎಲ್ಲರೂ ತಂಬಾಕು ಸೇವಿಸದಿರಲು ಹಾಗೂ ಇತರರನ್ನೂ ಪ್ರೇರೇಪಿಸಲು ಪ್ರತಿಜ್ಞೆ ಸ್ವೀಕರಿಸಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸಿದರು. ತಂಬಾಕು ಮುಕ್ತ ಸಮಾಜ ನಿರ್ಮಾಣದ ಅಗತ್ಯತೆಯನ್ನು ತಿಳಿಸುವ ವಿವಿಧ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟವು.












