30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

ಬೆಳ್ತಂಗಡಿ : ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ‌.

ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಜೂ.13 ರಂದು ಭೇಟಿ ನೀಡಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು , ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು, ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ ,ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ. ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಅವರ ಜಾಮೀನು ರದ್ದತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ನೇರಪ್ರಸಾರದ ಮೂಲಕ ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕೆಂದು ಮಾಧ್ಯಮಗಳಿಗೆ ಗಿರೀಶ್ ಮಟ್ಟಣ್ಣವರ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ಜೊತೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ , ಪ್ರಕಾಶ್.ಸಿ ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ,ಉದಯ ಉಜಿರೆ, ಶ್ರೀನಿವಾಸ್ ಮತ್ತಿತರರು ಜೊತೆಯಲ್ಲಿದ್ದರು.

Related posts

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya
error: Content is protected !!