32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ಕಲಿಕಾ ಕೇಂದ್ರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ತರಗತಿಯು ಆರಂಭಗೊಂಡಿದ್ದು ಯಕ್ಷಗಾನ ತರಗತಿ ಸಂಚಾಲಕರು, ಮಂಜುಶ್ರೀ ಪ್ರಿಂಟರ್ಸ್ ನ ನಿವೃತ್ತ ವ್ಯವಸ್ಥಾಪಕ ಶೇಖರ್ ಟಿ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಯಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಯಕ್ಷ ಗುರುಗಳಾದ ಅರುಣ್ ಕುಮಾರ್, ಶಶಿಧರ್ ಕಲ್ಮಂಜ, ನಾಗೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!