31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ಕಲಿಕಾ ಕೇಂದ್ರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ತರಗತಿಯು ಆರಂಭಗೊಂಡಿದ್ದು ಯಕ್ಷಗಾನ ತರಗತಿ ಸಂಚಾಲಕರು, ಮಂಜುಶ್ರೀ ಪ್ರಿಂಟರ್ಸ್ ನ ನಿವೃತ್ತ ವ್ಯವಸ್ಥಾಪಕ ಶೇಖರ್ ಟಿ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಯಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಯಕ್ಷ ಗುರುಗಳಾದ ಅರುಣ್ ಕುಮಾರ್, ಶಶಿಧರ್ ಕಲ್ಮಂಜ, ನಾಗೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya
error: Content is protected !!