29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

ಬೆಂಗಳೂರು: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಎರಡು ದಿನಗಳ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಗಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದು ಬಸವ ಅಕ್ಯೂ ಅಕಾಡೆಮಿ ಸದಸ್ಯ ಸುಕೇಶ್ ಜೈನ್ ಅಳದಂಗಡಿ ತಿಳಿಸಿದ್ದಾರೆ.

ಬಸವ ಅಕ್ಕೂ ಅಕಾಡೆಮಿ ಸಂಸ್ಥಾಪಕರಾದ ಡಾ. ಕೆ. ಬಸವರಾಜುರವರ ನೇತೃತ್ವದಲ್ಲಿ “ಮನೆ ಮನೆಯಲ್ಲೂ ವೈದ್ಯರಾಗುವ ಕನಸಿನೊಂದಿಗೆ” ಜೂ. 19 ಮತ್ತು 20 ರಂದು ಟಿ.ಇ.ಎಂ. ಕಲಿತಿರುವ ವಿದ್ಯಾರ್ಥಿಗಳಿಗಾಗಿ ಆಫ್‌ಲೈನ್‌ನಲ್ಲಿ ಎರಡು ದಿನ ನಡೆಯುವ ನೈಸರ್ಗಿಕ ಚಿಕಿತ್ಸಾ ವಿಧಾನವಾದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್, ಮರ್ಮ ಚಿಕಿತ್ಸೆ, ಸೀಡ್ ಥೆರಪಿ, ದೇಹದ ಪ್ರಮುಖ ಅಕ್ಯೂಪ್ರೆಜರ್ ಪಾಯಿಂಟ್ ಪರಿಚಯ, ಕಲರ್ ಥೆರಪಿ, ದೇಹದಲ್ಲಿ ಎನರ್ಜಿ ಸಮತೋಲನ ಮಾಡುವುದು, ಹೃದಯ ಆರೋಗ್ಯಕ್ಕೆ ನೈಸರ್ಗಿಕ ಪರಿಹಾರಗಳ ಬಗ್ಗೆ ಚಿಕಿತ್ಸಾ ಕಾರ್ಯಗಾರವನ್ನು ಅಂಬೇಡ್ಕರ್ ಭವನ, ಮಿಲ್ಲರ್ ರಸ್ತೆ, ಭಗವಾನ್ ಮಹಾವೀರ್ ಆಸ್ಪತ್ರೆ ಹತ್ತಿರ, ವಸಂತ ನಗರ, ಬೆಂಗಳೂರಿನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಏರ್ಪಡಿಸಲಾಗಿದೆ

ಕರ್ನಾಟಕಾದ್ಯಂತ ಎಲ್ಲಾ ಜಿಲ್ಲೆಗಳಿಂದ ಆಸಕ್ತಿಯುಳ್ಳ ಟಿ.ಇ.ಎಂ. ವಿದ್ಯಾರ್ಥಿಗಳು ಈ ಕಾರ್ಯಗಾರಕ್ಕೆ ಆಗಮಿಸಿ ಕಾರ್ಯಗಾರದ ಉಪಯೋಗ ಪಡೆಯಲು ಬಸವ ಅಕ್ಯು ಅಕಾಡೆಮಿ ಕೊರುತ್ತಿದೆ. ಹೆಚ್ಚಿನ ಮಾಹಿತಿಗಾಗಿ : 9606496408, 9606496409, 8088139861 ಸಂಪರ್ಕಿಸಿ.

Related posts

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya
error: Content is protected !!