25.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಫಾತಿಮತ್ ಮುಫೀದ 7ನೇ ತರಗತಿ ಮುಖ್ಯ ಮಂತ್ರಿಯಾಗಿ, ಜೋಶಿಲ್ ಶಾಜು 6ನೇ ತರಗತಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ವಿವಿಧ ಸಚಿವರಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚುನಾವಣಾ ಮಾರ್ಗದರ್ಶಿ ಶಿಕ್ಷಕಿ ಶ್ರೀಲತಾ ಸಿ ಎಚ್ ಅವರು ಪ್ರಮಾಣ ವಚನ ಬೋಧಿಸಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿ ನಾಯಕರು ಶಾಲೆಯ ಶಿಸ್ತು, ಸ್ವಚ್ಛತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ಶ್ರೀಮತಿ ರೋಹಿಣಿ ಕೆ ಅವರು ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳು, ಜವಾಬ್ದಾರಿಗಳು ಹಾಗೂ ಸೇವಾ ಮನೋಭಾವದ ಕುರಿತು ಮಾರ್ಗದರ್ಶನ ನೀಡಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!