24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಚಂದ್ರಶೇಖ‌ರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಅತ್ಯಂತ ಗಂಭೀರ ಮತ್ತು ಖಂಡನೀಯ ಸಂಗತಿಯಾಗಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷೆ ಶಮಾ ಉಜಿರೆ ತಿಳಿಸಿದ್ದಾರೆ.

ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಸ್ಥಳಗಳಲ್ಲಿ ಮಹಿಳೆಯರಿಗೆ ಕಿರುಕುಳ, ಬೆದರಿಕೆ ಅಥವಾ ಮಾನಸಿಕ ಹಿಂಸೆ ಉಂಟಾಗುವಂತಹ ಘಟನೆಗಳು ನಡೆಯುತ್ತಿರುವುದು ಸಮಾಜದ ತಲೆ ತಗ್ಗಿಸುವ ವಿಷಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ನಿಷ್ಪಕ್ಷಪಾತ ಮತ್ತು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆಗಳನ್ನು ಹೊರತೆಗೆದು ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ, ದೂರು ನೀಡಿದ ಮಹಿಳಾ ಸಿಬ್ಬಂದಿಗೆ ಅಗತ್ಯ ರಕ್ಷಣೆ ಹಾಗೂ ನ್ಯಾಯ ಒದಗಿಸಬೇಕು.

ಈ ಪ್ರಕರಣವು ಮಹಿಳೆಯರ ಕೆಲಸದ ಸ್ಥಳದಲ್ಲಿನ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಸ್ಪತ್ರೆ ಆಡಳಿತ ಮತ್ತು ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಮಾ ಉಜಿರೆ ಆಗ್ರಹಿಸಿದ್ದಾರೆ.

Related posts

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!