July 30, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

ಬೆಳ್ತಂಗಡಿ: ಎಕ್ಸೆಲ್ ಕಾಲೇಜು ಬೆಳ್ತಂಗಡಿ ಮತ್ತು ವೇಣೂರಿನ ಮಾನ್ಯತೆ ರದ್ದು ಆದೇಶದ ಬಗ್ಗೆ ಗೊಂದಲ ಬೇಡ, ರದ್ದಾಗಿರುವ ಕೋಡ್ ನಡಿ ನಾವು ಯಾವುದೇ ದಾಖಲಾತಿ ಮಾಡಿಕೊಂಡಿಲ್ಲ ಎಂದು ಎಕ್ಸೆಲ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಸ್ಪಷ್ಟನೆಯ ವಿವರ: ಸಾರ್ವಜನಿಕರ ಗಮನಕ್ಕೆ, ಕೆಲ ನ್ಯೂಸ್ ಚಾನೆನ್ ನಲ್ಲಿ ಕಾಲೇಜಿನ ಬಗ್ಗೆ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ನಾವು ನಮ್ಮ ಎಲ್ಲಾ ವಿದ್ಯಾರ್ಥಿಗಳನ್ನು College code SS0351 ರಲ್ಲಿ ದಾಖಲಾತಿ ಮಾಡಿದ್ದು, ಈ ಕಾಲೇಜು ಕೋಡ್ ನ ಮಾನ್ಯತೆಯ ಬಗ್ಗೆ ಮತ್ತು ವಿದ್ಯಾರ್ಥಿಗಳ ಯಾವ ಕಾಲೇಜು ಕೋಡ್ ನಲ್ಲಿ ದಾಖಲಾತಿ ಆಗಿದ್ದಾರೆ ಎನ್ನುವುದನ್ನು ಮಕ್ಕಳ ಸ್ಯಾಟ್ಸ್ ಸಂಖ್ಯೆ ಮೂಲಕ ಹತ್ತಿರದ ಡಿಡಿಪಿಯು ಕಚೇರಿ ಅಥವಾ ಸರಕಾರಿ ಕಾಲೇಜುಗಳಲ್ಲಿ ಖಚಿತ ಪಡಿಸಿಕೊಳ್ಳಬಹುದು.

ಈಗ ರದ್ದುಗೊಂಡಿರುವ ಕಾಲೇಜಿನ CODE SS0376 ಆಗಿದ್ದು, ಕಳೆದ ವರ್ಷ ಅದರ ಮಾನ್ಯತೆಗಾಗಿ ಅರ್ಜಿಯನ್ನು ಸಲ್ಲಿಸ್ಸಿದ್ದು ಮಾತ್ರ ವಿನಃ ಅದರಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ದಾಖಾಲಾತಿ ಮಾಡಿರಲಿಲ್ಲ. ಈ ವರ್ಷ ನಾವಾಗಿಯೇ ಅದರ ಮಾನ್ಯತೆಯನ್ನು ರದ್ದುಗೊಳಿಸಲು ಮಾರ್ಚ್ ತಿಂಗಳ ಕೊನೆಯಲ್ಲಿ ಅರ್ಜಿ ಹಾಕಿದ್ದೆವು. ಆದರೆ ಈಗ ಕಾಣದ ಕೈಗಳು ನಮ್ಮ ಸಂಸ್ಥೆಯ ಘನತೆಯನ್ನು ಹಾಳುಮಾಡುವ ಉದ್ದೇಶದಿಂದ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುಳ್ಳು ಸುದ್ದಿಯನ್ನು ELECTRONIC ಮಾಧ್ಯಮದ ಮೂಲಕ, ಸಾಮಾಜಿಕ ಮಾಧ್ಯಮದ ಮೂಲಕ ಪ್ರಯತ್ನಿಸುತ್ತಿದ್ದಾರೆ. ತಾವೆಲ್ಲರೂ ಗೊಂದಲಕ್ಕೆ ಒಳಗಾಗದೇ ಸಹಕರಿಸಬೇಕಾಗಿ ವಿನಂತಿ.ಉದ್ದೇಶಪೂರ್ವಕ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾಲೇಜು ಆಡಳಿತ ಮಂಡಳಿ ಸ್ವಷ್ಟನೆಯಲ್ಲಿ ತಿಳಿಸಿದ್ದಾರೆ.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
error: Content is protected !!