29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಮತದಾನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ಇಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಮತದಾನದ ವಿಧಾನಗಳನ್ನು ಪ್ರತ್ಯಕ್ಷವಾಗಿ ತಿಳಿಯಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ನಾಮಪತ್ರವನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಇವರಲ್ಲಿ ಸಲ್ಲಿಸಿದ್ದರು.

ಮತದಾನ ಮಾಡಲು ಮತಗಟ್ಟೆಯಲ್ಲಿ ಇವಿಎಂ ಬಳಸಲಾಗಿತ್ತು. ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗುರುತಿನ ಚೀಟಿಯಾಗಿತ್ತು. ಶಾಲಾ ನಾಯಕನಾಗಿ ಶ್ರೀವರ್ಚಸ್, ಶಾಲಾ ಉಪನಾಯಕನಾಗಿ ಅಮಿತ್, ಶಿಕ್ಷಣ ಮಂತ್ರಿಯಾಗಿ ಸಮರ್ಥ ಭಟ್, ನೀರಾವರಿ ಮಂತ್ರಿಯಾಗಿ ಎನ್ ಭಕ್ತಿ, ಶಿಸ್ತಿನ ಮಂತ್ರಿಯಾಗಿ ತೇಜಸ್ ಎಸ್, ಆಹಾರ ಮತ್ತು ಆರೋಗ್ಯ ಮಂತ್ರಿಯಾಗಿ ಅಲ್ಬಿನಾ ಟಿ. ಎ, ಸಾಂಸ್ಕೃತಿಕ ಮಂತ್ರಿಯಾಗಿ ಅಶ್ವಿತ, ಕ್ರೀಡಾ ಮಂತ್ರಿಯಾಗಿ ಆದ್ಯ ರೈ ಆಯ್ಕೆಯಾದರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ತಯಾರಿ ಇವಿಎಂ ಮತಯಂತ್ರದ ಉಸ್ತುವಾರಿಯನ್ನು ವಹಿಸಿದ್ದರು.

Related posts

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!