June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

​ ಪಡಂಗಡಿ : ಇದು ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಸಂಪರ್ಕಿಸುವ ಕಿನ್ನಿಗೋಳಿ – ಪಡಂಗಡಿ ರಸ್ತೆ. ದೇರೆಮಾರು ಸೇತುವೆ ದಾಟಿ ಗದ್ದೆ ಮೇಲಿನ ರಸ್ತೆಯ ತುದಿಗೆ ಬಂದರೆ ಸಾರ್ವಜನಿಕರಿಗೆ ಸ್ವಾಗತ ಕೋರುವುದು ಆಪತ್ತನ್ನು ಹೊತ್ತು ನಿಂತಿರುವ ಕೆಸರಿನ ರಾಶಿ!

ಇತ್ತೀಚೆಗೆ ಖಾಸಗಿ ವ್ಯಕ್ತಿಯೊಬ್ಬರು ರಸ್ತೆಯ ಬದಿಯ ಜಾಗವನ್ನು ಖರೀದಿಸಿ, ಅದಕ್ಕೆ ಅಪಾರ ಪ್ರಮಾಣದ ಮಣ್ಣು ತುಂಬಿಸಿ ರಸ್ತೆಯ ಮಟ್ಟಕ್ಕೆ ಎತ್ತರ ಮಾಡಿದ್ದಾರೆ. ಆದರೆ, ರಸ್ತೆ ಬದಿಯಲ್ಲಿ ಸರಾಗವಾಗಿ ಮಳೆನೀರು ಹರಿದು ಹೋಗಲು ಯಾವುದೇ ಚರಂಡಿ ವ್ಯವಸ್ಥೆಯನ್ನು ಮಾಡಿಲ್ಲ. ಇದರ ಪರಿಣಾಮವಾಗಿ, ಸುರಿಯುತ್ತಿರುವ ಮಳೆಯ ನೀರೆಲ್ಲಾ ಆ ಮಣ್ಣನ್ನು ಕೊಚ್ಚಿಕೊಂಡು ಬಂದು ಇಡೀ ರಸ್ತೆಯನ್ನೇ ಕೆಸರುಗದ್ದೆಯನ್ನಾಗಿ ಮಾಡಿದೆ.

​ಜೂನ್ 11ರ ರಾತ್ರಿ ವೇಣೂರು ಕಡೆಯ ದಂಪತಿಗಳು ಸ್ಕೂಟರ್‌ನಲ್ಲಿ ಇದೇ ರಸ್ತೆಯ ಮೇಲೆ ತೆರಳುತ್ತಿದ್ದಾಗ ಈ ಕೆಸರು ಮಣ್ಣಿನಲ್ಲಿ ಟಯರ್ ಸ್ಲಿಪ್ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ಹೆಲ್ಮೆಟ್ ಧರಿಸಿದ್ದ ಕಾರಣ ದೊಡ್ಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಲ್ಮೆಟ್ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು?
ಪ್ರತಿದಿನ ನೂರಾರು ವಾಹನಗಳು, ಭಕ್ತಾಧಿಗಳು ಸಂಚರಿಸುವ ಈ ರಸ್ತೆಯ ದಯನೀಯ ಸ್ಥಿತಿ ಸ್ಥಳೀಯ ಆಡಳಿತಕ್ಕೆ ತಿಳಿದಿಲ್ಲವೇ? ಅಥವಾ ಖಾಸಗಿ ವ್ಯಕ್ತಿಗಳು ತಮಗೆ ಬೇಕಾದಂತೆ ಮಣ್ಣು ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಹಾಳುಗೆಡವುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆಯೇ?

​ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಆದಷ್ಟು ಬೇಗ ರಸ್ತೆ ಬದಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಬೇಕು ಮತ್ತು ರಸ್ತೆಯ ಮೇಲಿರುವ ಕೆಸರನ್ನು ತೆರವುಗೊಳಿಸುವುದು ಉತ್ತಮ. ಇಲ್ಲದಿದ್ದರೆ ಮುಂದಾಗುವ ಪ್ರತಿಯೊಂದು ಅಪಘಾತ ಹಾಗೂ ಅನಾಹುತಗಳಿಗೂ ಸ್ಥಳೀಯ ಆಡಳಿತವೇ ನೇರ ಹೊಣೆ ಹೊರಬೇಕಾದೀತು ಸ್ಥಳೀಯರ ಎಚ್ಚರಿಕೆ.

Related posts

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!