30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ: ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಭಕ್ತಿಭಾವ ಹಾಗೂ ಶ್ರದ್ಧಾಪೂರ್ವಕವಾಗಿ ನೆರವೇರಿತು.

ಈ ಸಂದರ್ಭದಲ್ಲಿ ನಡೆದ ಪವಿತ್ರ ಬಲಿಪೂಜೆಯ ನೇತೃತ್ವವನ್ನು ಬೆದ್ರಬೆಟ್ಟುವಿನ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ವಂದನೀಯ ಫಾ. ಮ್ಯಾಥ್ಯೂ ವಹಿಸಿದ್ದರು.

ತಮ್ಮ ಪ್ರಬೋಧನೆಯಲ್ಲಿ ಅವರು ಸಂತ ಅಂತೋಣಿಯವರ ಜೀವನ, ತ್ಯಾಗ, ಸೇವಾ ಮನೋಭಾವ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಕುರಿತು ವಿವರಿಸಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸತ್ಯನಿಷ್ಠೆ, ಪ್ರೀತಿ, ಕರುಣೆ ಹಾಗೂ ಸೇವಾಭಾವನೆಗಳನ್ನು ಅಳವಡಿಸಿಕೊಳ್ಳಬೇಕೆಂದು ನೈತಿಕ ಸಂದೇಶ ನೀಡಿದರು.

ಬಲಿಪೂಜೆಯಲ್ಲಿ ಅನುಗ್ರಹ ವಿದ್ಯಾಸಂಸ್ಥೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ ವಂದನೀಯ ಫಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಪ್ರವೀಣ್ ವಿಜಯ್ ಡಿಸೋಜ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಬಲಿಪೂಜೆಯ ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ನೆರೆದಿದ್ದ ಪಾಲಕರು ಮತ್ತು ಅತಿಥಿಗಳ ಮೆಚ್ಚುಗೆಗೆ ಪಾತ್ರವಾದವು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸ್ನೇಹಲ್ ಅಡ್ಲಿನ್ ಡಿಸೋಜ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

Suddi Udaya
error: Content is protected !!