July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

ಬೆಳ್ತಂಗಡಿ : ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ‌.

ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಜೂ.13 ರಂದು ಭೇಟಿ ನೀಡಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು , ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು, ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ ,ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ. ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಅವರ ಜಾಮೀನು ರದ್ದತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ನೇರಪ್ರಸಾರದ ಮೂಲಕ ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕೆಂದು ಮಾಧ್ಯಮಗಳಿಗೆ ಗಿರೀಶ್ ಮಟ್ಟಣ್ಣವರ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ಜೊತೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ , ಪ್ರಕಾಶ್.ಸಿ ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ,ಉದಯ ಉಜಿರೆ, ಶ್ರೀನಿವಾಸ್ ಮತ್ತಿತರರು ಜೊತೆಯಲ್ಲಿದ್ದರು.

Related posts

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya

ಮಿತ್ತಬಾಗಿಲು: ನಾಟಿ ವೈದ್ಯ ಲಿಂಗಪ್ಪ ಪೂಜಾರಿ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya
error: Content is protected !!