29.5 C
ಪುತ್ತೂರು, ಬೆಳ್ತಂಗಡಿ
June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

ಬೆಳ್ತಂಗಡಿ : ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ತಂಡ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿ ದೂರು ಅರ್ಜಿ ನೀಡಿದ್ದಾರೆ‌.

ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಜೂ.13 ರಂದು ಭೇಟಿ ನೀಡಿ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಪೊಲೀಸ್ ಭದ್ರತೆ ನೀಡಬೇಕು , ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಮಾಡಬೇಕು, ಹೈಕೋರ್ಟ್ ಗೆ ನೀಡಿದ ಹೇಳಿಕೆಯನ್ನು ಮಾಧ್ಯಮಗಳಿಗೆ ,ಸಾಮಾಜಿಕ ಜಾಲತಾಣಗಳಿಗೆ ಕೊಡಬಾರದು ಎಂಬ ಜಾಮೀನು ಷರತ್ತು ಉಲ್ಲಂಘನೆಯಾಗಿರುತ್ತದೆ. ಹೀಗಾಗಿ SIT ತಂಡದ ನ್ಯಾಯವಾದಿಗಳು ಚಿನ್ನಯ್ಯನ ಅವರ ಜಾಮೀನು ರದ್ದತಿ ಅರ್ಜಿ ಸಲ್ಲಿಸಬೇಕು. ಜೊತೆಗೆ ನೇರಪ್ರಸಾರದ ಮೂಲಕ ನನ್ನ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕೆಂದು ಮಾಧ್ಯಮಗಳಿಗೆ ಗಿರೀಶ್ ಮಟ್ಟಣ್ಣವರ್ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ,ಜಯಂತ್ ಟಿ ಜೊತೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ , ಪ್ರಕಾಶ್.ಸಿ ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ,ಉದಯ ಉಜಿರೆ, ಶ್ರೀನಿವಾಸ್ ಮತ್ತಿತರರು ಜೊತೆಯಲ್ಲಿದ್ದರು.

Related posts

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya
error: Content is protected !!