July 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ಕಲಿಕಾ ಕೇಂದ್ರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ತರಗತಿಯು ಆರಂಭಗೊಂಡಿದ್ದು ಯಕ್ಷಗಾನ ತರಗತಿ ಸಂಚಾಲಕರು, ಮಂಜುಶ್ರೀ ಪ್ರಿಂಟರ್ಸ್ ನ ನಿವೃತ್ತ ವ್ಯವಸ್ಥಾಪಕ ಶೇಖರ್ ಟಿ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಯಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಯಕ್ಷ ಗುರುಗಳಾದ ಅರುಣ್ ಕುಮಾರ್, ಶಶಿಧರ್ ಕಲ್ಮಂಜ, ನಾಗೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya
error: Content is protected !!