25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

ಮಂಗಳೂರು : ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಮಂಗಳೂರು ವಿಭಾಗದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ-ಮರೋಳಿ ಹತ್ತಿರ ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬುದಾಗಿ ದೊರೆತ ಮಾಹಿತಿಯಂತೆ ಜೂ.11 ರಂದು ಸಂಜೆ 3.30 ಗಂಟೆಗೆ ಮಂಗಳೂರು ಮರೋಳಿ ಬಳಿಯಲ್ಲಿ ಹೋಗಿ ದೃಡಪಡಿಸಿಕೊಂಡು ಆರೋಪಿಗಳು 2 ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಖಚಿತಪಡಿಸಿಕೊಂಡು ತಕ್ಷಣ ದಾಳಿ ಮಾಡಿ 3 ಜನ ಆರೋಪಿಗಳನ್ನು, ಎರಡು ಕಾರು ಮತ್ತು ಆನೆ ದಂತಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.

ಆರೋಪಿಗಳಿಂದ 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಳ್ಳಲಾಗಿದೆ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಶಶಾಂಕ , ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ನಿವಾಸಿ ಖಾದರ್ ಯಾನೆ ಅಬ್ದುಲ್ ಖಾದರ್, ಮಂಗಳೂರು ಜಿಲ್ಲೆಯ ಅತ್ತಾವರ ,ಜೆಪ್ಪು ನಿವಾಸಿ ಪ್ರಭಾಚಂದ್ರ ರವರನ್ನು ವಶಕ್ಕೆ ಪಡೆದು ಪ್ರಕರಣ ತನಿಖೆಯಲ್ಲಿರುತ್ತದೆ.

ಮಾನ್ಯ ಪೊಲೀಸ್ ಉಪಮಹಾನಿರೀಕ್ಷಕರು, ಸಿ.ಐ.ಡಿ ಅರಣ್ಯ ಘಟಕ, ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ಪವನ್‌ನೆಟ್ಟೂರು ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸು ಉಪನಿರೀಕ್ಷಕರಾದ ಶ್ರೀ ದಿಲೀಪ್ ಜಿ ಆರ್ ಹಾಗೂ ಸಿಬ್ಬಂದಿಗಳಾದ ಜಯರಾಮ ಕೆಟಿ, ಬಾಲಕೃಷ್ಣ ಕೆಎಂ, ತಾರನಾಥ ಎಸ್ ಮತ್ತು ಅಬ್ದುಲ್‌ ರವೂಫ್‌ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Related posts

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!