26.1 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಮತದಾನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ಇಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಮತದಾನದ ವಿಧಾನಗಳನ್ನು ಪ್ರತ್ಯಕ್ಷವಾಗಿ ತಿಳಿಯಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ನಾಮಪತ್ರವನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಇವರಲ್ಲಿ ಸಲ್ಲಿಸಿದ್ದರು.

ಮತದಾನ ಮಾಡಲು ಮತಗಟ್ಟೆಯಲ್ಲಿ ಇವಿಎಂ ಬಳಸಲಾಗಿತ್ತು. ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗುರುತಿನ ಚೀಟಿಯಾಗಿತ್ತು. ಶಾಲಾ ನಾಯಕನಾಗಿ ಶ್ರೀವರ್ಚಸ್, ಶಾಲಾ ಉಪನಾಯಕನಾಗಿ ಅಮಿತ್, ಶಿಕ್ಷಣ ಮಂತ್ರಿಯಾಗಿ ಸಮರ್ಥ ಭಟ್, ನೀರಾವರಿ ಮಂತ್ರಿಯಾಗಿ ಎನ್ ಭಕ್ತಿ, ಶಿಸ್ತಿನ ಮಂತ್ರಿಯಾಗಿ ತೇಜಸ್ ಎಸ್, ಆಹಾರ ಮತ್ತು ಆರೋಗ್ಯ ಮಂತ್ರಿಯಾಗಿ ಅಲ್ಬಿನಾ ಟಿ. ಎ, ಸಾಂಸ್ಕೃತಿಕ ಮಂತ್ರಿಯಾಗಿ ಅಶ್ವಿತ, ಕ್ರೀಡಾ ಮಂತ್ರಿಯಾಗಿ ಆದ್ಯ ರೈ ಆಯ್ಕೆಯಾದರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ತಯಾರಿ ಇವಿಎಂ ಮತಯಂತ್ರದ ಉಸ್ತುವಾರಿಯನ್ನು ವಹಿಸಿದ್ದರು.

Related posts

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya
error: Content is protected !!