31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಮತದಾನದಲ್ಲಿ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ಇಲ್ಲಿ ಬಳಸಿ ವಿದ್ಯಾರ್ಥಿಗಳಿಗೆ ಮತದಾನದ ವಿಧಾನಗಳನ್ನು ಪ್ರತ್ಯಕ್ಷವಾಗಿ ತಿಳಿಯಲು ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ನಾಮಪತ್ರವನ್ನು ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಇವರಲ್ಲಿ ಸಲ್ಲಿಸಿದ್ದರು.

ಮತದಾನ ಮಾಡಲು ಮತಗಟ್ಟೆಯಲ್ಲಿ ಇವಿಎಂ ಬಳಸಲಾಗಿತ್ತು. ಹಾಗೂ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗುರುತಿನ ಚೀಟಿಯಾಗಿತ್ತು. ಶಾಲಾ ನಾಯಕನಾಗಿ ಶ್ರೀವರ್ಚಸ್, ಶಾಲಾ ಉಪನಾಯಕನಾಗಿ ಅಮಿತ್, ಶಿಕ್ಷಣ ಮಂತ್ರಿಯಾಗಿ ಸಮರ್ಥ ಭಟ್, ನೀರಾವರಿ ಮಂತ್ರಿಯಾಗಿ ಎನ್ ಭಕ್ತಿ, ಶಿಸ್ತಿನ ಮಂತ್ರಿಯಾಗಿ ತೇಜಸ್ ಎಸ್, ಆಹಾರ ಮತ್ತು ಆರೋಗ್ಯ ಮಂತ್ರಿಯಾಗಿ ಅಲ್ಬಿನಾ ಟಿ. ಎ, ಸಾಂಸ್ಕೃತಿಕ ಮಂತ್ರಿಯಾಗಿ ಅಶ್ವಿತ, ಕ್ರೀಡಾ ಮಂತ್ರಿಯಾಗಿ ಆದ್ಯ ರೈ ಆಯ್ಕೆಯಾದರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ತಯಾರಿ ಇವಿಎಂ ಮತಯಂತ್ರದ ಉಸ್ತುವಾರಿಯನ್ನು ವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
error: Content is protected !!