ಉರುವಾಲು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆ ಜೂ.12ರಂದು ನಡೆಯಿತು.

ಈ ವೇಳೆ ರಾಧಾಕೃಷ್ಣ ಫೌಂಡೇಷನ್ ಬೆಂಗಳೂರು ಇಲ್ಲಿನ ಮುಖ್ಯಸ್ಥರಾದ ಶ್ರೀಮತಿ ಡಾ .ವಿಧ್ಯಾ ಭಟ್ ಹಾಗೂ ಡಾ.ವಿಶ್ವನಾಥ್ ಭಟ್ ಇವರ ಪ್ರಾಯೋಜಕತ್ವದಲ್ಲಿ ನೀಡಲ್ಪಟ್ಟ ಸನಾತನ ಸಂಸ್ಕೃತಿಯ ಪುಸ್ತಕಗಳನ್ನು ಉದ್ಘಾಟಿಸಲಾಯಿತು.

ಸೇವಾ ಸಮಿತಿಯ ದಿಗ್ಧರ್ಶಕರಾದ ಮಾಯಿಲ್ತೋಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ ಪ್ರಸಾದ್ ಹಾಗೂ ಸದಸ್ಯರಾದ ಸುಶೀಲ ಭಟ್ ಇವರುಗಳು ಪುಸ್ತಕಗಳ ಉದ್ಘಾಟನೆಯನ್ನು ಪೋಷಕರ ಸಮ್ಮುಖದಲ್ಲಿ ನೆರವೇರಿಸಿ, ಬಳಿಕ ಅವರು ಈ ಪುಸ್ತಕಗಳ ವಿಶೇಷತೆ ಬಗ್ಗೆ ಇದರ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಬಳಿಕ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಹೆತ್ತವರ ಸಭೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘವು ರಚನೆಗೊಂಡಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು













