July 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಪೋಷಕರ ಸಭೆ ಜೂ.12ರಂದು ನಡೆಯಿತು.

ಈ ವೇಳೆ ರಾಧಾಕೃಷ್ಣ ಫೌಂಡೇಷನ್ ಬೆಂಗಳೂರು ಇಲ್ಲಿನ ಮುಖ್ಯಸ್ಥರಾದ ಶ್ರೀಮತಿ ಡಾ .ವಿಧ್ಯಾ ಭಟ್ ಹಾಗೂ ಡಾ.ವಿಶ್ವನಾಥ್ ಭಟ್ ಇವರ ಪ್ರಾಯೋಜಕತ್ವದಲ್ಲಿ ನೀಡಲ್ಪಟ್ಟ ಸನಾತನ ಸಂಸ್ಕೃತಿಯ ಪುಸ್ತಕಗಳನ್ನು ಉದ್ಘಾಟಿಸಲಾಯಿತು.

ಸೇವಾ ಸಮಿತಿಯ ದಿಗ್ಧರ್ಶಕರಾದ ಮಾಯಿಲ್ತೋಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ ಪ್ರಸಾದ್ ಹಾಗೂ ಸದಸ್ಯರಾದ ಸುಶೀಲ ಭಟ್ ಇವರುಗಳು ಪುಸ್ತಕಗಳ ಉದ್ಘಾಟನೆಯನ್ನು ಪೋಷಕರ ಸಮ್ಮುಖದಲ್ಲಿ ನೆರವೇರಿಸಿ, ಬಳಿಕ ಅವರು ಈ ಪುಸ್ತಕಗಳ ವಿಶೇಷತೆ ಬಗ್ಗೆ ಇದರ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.


ಬಳಿಕ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಹೆತ್ತವರ ಸಭೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘವು ರಚನೆಗೊಂಡಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯಶಿಕ್ಷಕಿ ಶೋಭಿತ ಕೆ ಆರ್ ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya
error: Content is protected !!