29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಪಾಯಕಾರಿ ಕಿನ್ನಿಗೋಳಿ – ಪಡಂಗಡಿ ರಸ್ತೆ : ಚರಂಡಿ ವ್ಯವಸ್ಥೆ ನಿರ್ಮಿಸುವಂತೆ ಸ್ಥಳೀಯರ ಆಗ್ರಹ

​ ಪಡಂಗಡಿ : ಇದು ಪ್ರಸಿದ್ಧ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಸಂಪರ್ಕಿಸುವ ಕಿನ್ನಿಗೋಳಿ – ಪಡಂಗಡಿ ರಸ್ತೆ. ದೇರೆಮಾರು ಸೇತುವೆ ದಾಟಿ ಗದ್ದೆ ಮೇಲಿನ ರಸ್ತೆಯ ತುದಿಗೆ ಬಂದರೆ ಸಾರ್ವಜನಿಕರಿಗೆ ಸ್ವಾಗತ ಕೋರುವುದು ಆಪತ್ತನ್ನು ಹೊತ್ತು ನಿಂತಿರುವ ಕೆಸರಿನ ರಾಶಿ!

ಇತ್ತೀಚೆಗೆ ಖಾಸಗಿ ವ್ಯಕ್ತಿಯೊಬ್ಬರು ರಸ್ತೆಯ ಬದಿಯ ಜಾಗವನ್ನು ಖರೀದಿಸಿ, ಅದಕ್ಕೆ ಅಪಾರ ಪ್ರಮಾಣದ ಮಣ್ಣು ತುಂಬಿಸಿ ರಸ್ತೆಯ ಮಟ್ಟಕ್ಕೆ ಎತ್ತರ ಮಾಡಿದ್ದಾರೆ. ಆದರೆ, ರಸ್ತೆ ಬದಿಯಲ್ಲಿ ಸರಾಗವಾಗಿ ಮಳೆನೀರು ಹರಿದು ಹೋಗಲು ಯಾವುದೇ ಚರಂಡಿ ವ್ಯವಸ್ಥೆಯನ್ನು ಮಾಡಿಲ್ಲ. ಇದರ ಪರಿಣಾಮವಾಗಿ, ಸುರಿಯುತ್ತಿರುವ ಮಳೆಯ ನೀರೆಲ್ಲಾ ಆ ಮಣ್ಣನ್ನು ಕೊಚ್ಚಿಕೊಂಡು ಬಂದು ಇಡೀ ರಸ್ತೆಯನ್ನೇ ಕೆಸರುಗದ್ದೆಯನ್ನಾಗಿ ಮಾಡಿದೆ.

​ಜೂನ್ 11ರ ರಾತ್ರಿ ವೇಣೂರು ಕಡೆಯ ದಂಪತಿಗಳು ಸ್ಕೂಟರ್‌ನಲ್ಲಿ ಇದೇ ರಸ್ತೆಯ ಮೇಲೆ ತೆರಳುತ್ತಿದ್ದಾಗ ಈ ಕೆಸರು ಮಣ್ಣಿನಲ್ಲಿ ಟಯರ್ ಸ್ಲಿಪ್ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರು ಹೆಲ್ಮೆಟ್ ಧರಿಸಿದ್ದ ಕಾರಣ ದೊಡ್ಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಲ್ಮೆಟ್ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು?
ಪ್ರತಿದಿನ ನೂರಾರು ವಾಹನಗಳು, ಭಕ್ತಾಧಿಗಳು ಸಂಚರಿಸುವ ಈ ರಸ್ತೆಯ ದಯನೀಯ ಸ್ಥಿತಿ ಸ್ಥಳೀಯ ಆಡಳಿತಕ್ಕೆ ತಿಳಿದಿಲ್ಲವೇ? ಅಥವಾ ಖಾಸಗಿ ವ್ಯಕ್ತಿಗಳು ತಮಗೆ ಬೇಕಾದಂತೆ ಮಣ್ಣು ತುಂಬಿಸಿ ಸಾರ್ವಜನಿಕ ರಸ್ತೆಯನ್ನು ಹಾಳುಗೆಡವುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆಯೇ?

​ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಆದಷ್ಟು ಬೇಗ ರಸ್ತೆ ಬದಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಬೇಕು ಮತ್ತು ರಸ್ತೆಯ ಮೇಲಿರುವ ಕೆಸರನ್ನು ತೆರವುಗೊಳಿಸುವುದು ಉತ್ತಮ. ಇಲ್ಲದಿದ್ದರೆ ಮುಂದಾಗುವ ಪ್ರತಿಯೊಂದು ಅಪಘಾತ ಹಾಗೂ ಅನಾಹುತಗಳಿಗೂ ಸ್ಥಳೀಯ ಆಡಳಿತವೇ ನೇರ ಹೊಣೆ ಹೊರಬೇಕಾದೀತು ಸ್ಥಳೀಯರ ಎಚ್ಚರಿಕೆ.

Related posts

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya
error: Content is protected !!