August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

ನಾವೂರು: ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲ ರಚನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು. ಫಾತಿಮತ್ ಮುಫೀದ 7ನೇ ತರಗತಿ ಮುಖ್ಯ ಮಂತ್ರಿಯಾಗಿ, ಜೋಶಿಲ್ ಶಾಜು 6ನೇ ತರಗತಿ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ವಿವಿಧ ಸಚಿವರಾಗಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚುನಾವಣಾ ಮಾರ್ಗದರ್ಶಿ ಶಿಕ್ಷಕಿ ಶ್ರೀಲತಾ ಸಿ ಎಚ್ ಅವರು ಪ್ರಮಾಣ ವಚನ ಬೋಧಿಸಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿ ನಾಯಕರು ಶಾಲೆಯ ಶಿಸ್ತು, ಸ್ವಚ್ಛತೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ಶ್ರೀಮತಿ ರೋಹಿಣಿ ಕೆ ಅವರು ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳು, ಜವಾಬ್ದಾರಿಗಳು ಹಾಗೂ ಸೇವಾ ಮನೋಭಾವದ ಕುರಿತು ಮಾರ್ಗದರ್ಶನ ನೀಡಿದರು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
error: Content is protected !!