25.1 C
ಪುತ್ತೂರು, ಬೆಳ್ತಂಗಡಿ
August 5, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

ಮಂಗಳೂರು : ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಮಂಗಳೂರು ವಿಭಾಗದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ-ಮರೋಳಿ ಹತ್ತಿರ ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬುದಾಗಿ ದೊರೆತ ಮಾಹಿತಿಯಂತೆ ಜೂ.11 ರಂದು ಸಂಜೆ 3.30 ಗಂಟೆಗೆ ಮಂಗಳೂರು ಮರೋಳಿ ಬಳಿಯಲ್ಲಿ ಹೋಗಿ ದೃಡಪಡಿಸಿಕೊಂಡು ಆರೋಪಿಗಳು 2 ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಖಚಿತಪಡಿಸಿಕೊಂಡು ತಕ್ಷಣ ದಾಳಿ ಮಾಡಿ 3 ಜನ ಆರೋಪಿಗಳನ್ನು, ಎರಡು ಕಾರು ಮತ್ತು ಆನೆ ದಂತಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.

ಆರೋಪಿಗಳಿಂದ 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಳ್ಳಲಾಗಿದೆ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಶಶಾಂಕ , ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ನಿವಾಸಿ ಖಾದರ್ ಯಾನೆ ಅಬ್ದುಲ್ ಖಾದರ್, ಮಂಗಳೂರು ಜಿಲ್ಲೆಯ ಅತ್ತಾವರ ,ಜೆಪ್ಪು ನಿವಾಸಿ ಪ್ರಭಾಚಂದ್ರ ರವರನ್ನು ವಶಕ್ಕೆ ಪಡೆದು ಪ್ರಕರಣ ತನಿಖೆಯಲ್ಲಿರುತ್ತದೆ.

ಮಾನ್ಯ ಪೊಲೀಸ್ ಉಪಮಹಾನಿರೀಕ್ಷಕರು, ಸಿ.ಐ.ಡಿ ಅರಣ್ಯ ಘಟಕ, ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ಪವನ್‌ನೆಟ್ಟೂರು ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸು ಉಪನಿರೀಕ್ಷಕರಾದ ಶ್ರೀ ದಿಲೀಪ್ ಜಿ ಆರ್ ಹಾಗೂ ಸಿಬ್ಬಂದಿಗಳಾದ ಜಯರಾಮ ಕೆಟಿ, ಬಾಲಕೃಷ್ಣ ಕೆಎಂ, ತಾರನಾಥ ಎಸ್ ಮತ್ತು ಅಬ್ದುಲ್‌ ರವೂಫ್‌ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Related posts

ಎ.20: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರಿಂದ ಬೃಹತ್ ರೋಡ್ ಶೋ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya
error: Content is protected !!