31.1 C
ಪುತ್ತೂರು, ಬೆಳ್ತಂಗಡಿ
June 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

ಮಂಗಳೂರು : ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಮಂಗಳೂರು ವಿಭಾಗದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ-ಮರೋಳಿ ಹತ್ತಿರ ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬುದಾಗಿ ದೊರೆತ ಮಾಹಿತಿಯಂತೆ ಜೂ.11 ರಂದು ಸಂಜೆ 3.30 ಗಂಟೆಗೆ ಮಂಗಳೂರು ಮರೋಳಿ ಬಳಿಯಲ್ಲಿ ಹೋಗಿ ದೃಡಪಡಿಸಿಕೊಂಡು ಆರೋಪಿಗಳು 2 ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಖಚಿತಪಡಿಸಿಕೊಂಡು ತಕ್ಷಣ ದಾಳಿ ಮಾಡಿ 3 ಜನ ಆರೋಪಿಗಳನ್ನು, ಎರಡು ಕಾರು ಮತ್ತು ಆನೆ ದಂತಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.

ಆರೋಪಿಗಳಿಂದ 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ಮುಂದಿನ ಕ್ರಮದ ಬಗ್ಗೆ ವಶಪಡಿಸಿಕೊಳ್ಳಲಾಗಿದೆ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಶಶಾಂಕ , ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ನಿವಾಸಿ ಖಾದರ್ ಯಾನೆ ಅಬ್ದುಲ್ ಖಾದರ್, ಮಂಗಳೂರು ಜಿಲ್ಲೆಯ ಅತ್ತಾವರ ,ಜೆಪ್ಪು ನಿವಾಸಿ ಪ್ರಭಾಚಂದ್ರ ರವರನ್ನು ವಶಕ್ಕೆ ಪಡೆದು ಪ್ರಕರಣ ತನಿಖೆಯಲ್ಲಿರುತ್ತದೆ.

ಮಾನ್ಯ ಪೊಲೀಸ್ ಉಪಮಹಾನಿರೀಕ್ಷಕರು, ಸಿ.ಐ.ಡಿ ಅರಣ್ಯ ಘಟಕ, ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ಪವನ್‌ನೆಟ್ಟೂರು ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸು ಉಪನಿರೀಕ್ಷಕರಾದ ಶ್ರೀ ದಿಲೀಪ್ ಜಿ ಆರ್ ಹಾಗೂ ಸಿಬ್ಬಂದಿಗಳಾದ ಜಯರಾಮ ಕೆಟಿ, ಬಾಲಕೃಷ್ಣ ಕೆಎಂ, ತಾರನಾಥ ಎಸ್ ಮತ್ತು ಅಬ್ದುಲ್‌ ರವೂಫ್‌ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

Related posts

ಭಾರತೀಯ ಜನತಾ ಪಾರ್ಟಿಯ ನಾವೂರು ಶಕ್ತಿ ಕೇಂದ್ರದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
error: Content is protected !!