ಕೊಕ್ಕಡ: ಭಾರತೀಯ ಸೇನೆಗೆ ಆಯ್ಕೆಯಾದ ಕೊಕ್ಕಡ ನಿವಾಸಿ ಪ್ರೀತಮ್ ಜೈನ್ ರವರಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಬೆಳ್ತಂಗಡಿಯ ಕೊಕ್ಕಡದ ಎಳ್ನೀರು ನಿವಾಸಿ ಸಂಪತ್ ಕುಮಾರ್ ಹಾಗೂ ಶ್ರೀಮತಿ ಶೋಭಿತ ರವರ ಪುತ್ರ ಪ್ರೀತಮ್ ಜೈನ್ ಇವರು ಭಾರತೀಯ ಸೇನೆಗೆ ಆಯ್ಕೆಯಾಗಿರುವುದು ಸಮಾಜಕ್ಕೆ ಹಾಗೂ ಊರಿಗೆ ಹೆಮ್ಮೆಯ ವಿಷಯವಾಗಿದೆ. ಬಸದಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರಿಯರಾಗುತ್ತಿದ್ದರು.
ಈ ಸಂದರ್ಭದಲ್ಲಿ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕ್ಷೇತ್ರ ಚಂದ್ರಪುರ ಶಿಶಿಲ ದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಶುಭಕೋರಲಾಯಿತು. ಡಾ. ಕೆ. ಜಯಕೀರ್ತಿ ಜೈನ್, ಹೆಚ್. ವಿಜಯ ಕುಮಾರ್ ಜೈನ್, ಫಣಿರಾಜ್ ಜೈನ್, ಪಿ ಅತಶಯ ಜೈನ್, ಪ್ರೀತಮ್ ಜೈನ್, ಸಂಪತ್ ಜೈನ್ ಉಪಸ್ಥಿತರಿದ್ದರು.













