26.5 C
ಪುತ್ತೂರು, ಬೆಳ್ತಂಗಡಿ
September 19, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಶಿಕ್ಷಕ ರಕ್ಷಕ ಸಭೆಯು ಶಾಲಾ ಸಭಾಂಗಣದಲ್ಲಿ ಜೂ.13ರಂದು ನಡೆಯಿತು.

ಸಭಾ ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಶಾಲಾ ಮುಖ್ಯ ಉಪಾಧ್ಯಾಯಿನಿ ಜಾಕಿನ್ ಬಿನ್ , ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಮತ್ತು ಅರೇಬಿಕ್ ಶಿಕ್ಷಣದ ಗುರುಗಳು ಉಪಸ್ಥಿತರಿದ್ದರು. 2026-27ನೇ ಸಾಲಿನ ಶಾಲಾ ವಾರ್ಷಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿಯನ್ನು ನೀಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ರವರು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು.ಮಗುವಿನ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಜೊತೆ ಪೋಷಕರು ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಶಾಲಾ ಅರೇಬಿಕ್ ಶಿಕ್ಷಣ ವಿಭಾಗದ ಮುಖ್ಯೋಪಾಧ್ಯಾಯರಾದ ಮುಹಮ್ಮದ್ ಶರೀಫ್ ಸಖಾಫಿ ಬೆದ್ರಬೆಟ್ಟು ಅರೇಬಿಕ್ ಶಿಕ್ಷಣದ ಬಗ್ಗೆ ಪೋಷಕರಿಗೆ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಕಾರ್ಯದರ್ಶಿಯಾದ ಸಯ್ಯದ್ ಮಹಮ್ಮದ್ ಅಯ್ಯುಬ್ ರವರು ಮಾತನಾಡಿ, ಪೋಷಕರ ಪ್ರೀತಿ, ಸಹಕಾರದಿಂದ ಸಂಸ್ಥೆಯು ಉನ್ನತ ಮಟ್ಟಕ್ಕೇರುತ್ತಿದೆ.ಇದೇ ರೀತಿ ಮುಂದೆಯೂ ಸಂಸ್ಥೆಯ ಬೆಳವಣಿಗೆಗೆ ತಾವೆಲ್ಲರೂ ಸಹಕರಿಸಬೇಕೆಂದು ಕೇಳಿಕೊಳ್ಳುತ್ತ ಪೋಷಕರೆಲ್ಲರಿಗೂ ಧನ್ಯವಾದ ಸಮರ್ಪಿಸಿ ಸಭೆಯನ್ನು ಕೊನೆಗೊಳಿಸಲಾಯಿತು.

Related posts

ಧರ್ಮಸ್ಥಳ: ಗ್ರಾಮಾಭಿವೃದ್ದಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನಿಂದ “ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶ”

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 9ನೇ ಭಾರಿ ಸಾಧನ‌ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya
error: Content is protected !!