24.7 C
ಪುತ್ತೂರು, ಬೆಳ್ತಂಗಡಿ
June 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ

ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ ಪ್ರಸ್ತಾವನೆಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ರೂ.9 ಕೋಟಿ ಬಿಡುಗಡೆಗೊಳಿಸಿದ್ದು ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮವು ಜೂ.14 ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಜರುಗಿತು.

ನೂತನ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರ ಉಪಸ್ಥಿತಿಯಲ್ಲಿ ಹೈಕೋರ್ಟ್, ನ್ಯಾಯಮೂರ್ತಿಗಳು ಮತ್ತು ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್.ಟಿ. ನರೇಂದ್ರ ಪ್ರಸಾದ್‌ರವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ನ್ಯಾಯಾಧೀಶರಾದ ಬಸವರಾಜ್ ವಹಿಸಿಕೊಂಡಿಸಿದ್ದರು. ಮುಖ್ಯ ಅಥಿತಿಗಳಾಗಿ ಆರೋಗ್ಯ ಇಲಾಖೆಯ ಸಚಿವ ಯು.ಟಿ ಖಾದರ್, ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ ಕೆ, ತ್ಯಾಗರಾಜ್ ಎನ್. ಇನವಳ್ಳಿ, ಮುರಳೀಧರ ಪೈ, ಸಂಸದ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕರುಗಳಾದ ಐವನ್ ಡಿಸೋಜ ಮತ್ತು ಕೆ. ಪ್ರತಾಪಸಿಂಹ ನಾಯಕ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯ ಪಿ.ಪಿ ಹೆಗ್ಡೆ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ಗ್ ಶಿವರಾಂ ಭಾಗವಹಿಸಿದ್ದಾರೆ.

ದ.ಕ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜು, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ, ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ್ ಎಂ., ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತತ ಗೋಕುಲ್‌ದಾಸ್, ಲೋಕೋಪಯೋಗಿ ಇಲಾಖೆ ಜಿಲ್ಲಾ ಕಾರ್ಯನಿರ್ವಾಹಕರಾದ ಅಭಿಯಂತರ ರಾಘವೇಂದ್ರ ನಾಯ್ಕ, ಸಮಿತಿ ಅಧ್ಯಕ್ಷ ಶಿವಕುಮಾರ್ ಎಸ್. ಎಂ., ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ, ಅಪರ ಸರಕಾರಿ ವಕೀಲ ಮನೋಹರ್ ಕುಮಾರ್, ನೋಟರಿ ವಕೀಲರಾದ ಭಗೀರಥ ಜಿ., ನ್ಯಾಯವಾದಿ ಗಣೇಶ್ ಗೌಡ, ನ್ಯಾಯವಾದಿ ಹಾಗೂ ನೋಟರಿ ಸಂತೋಷ್ ಕುಮಾರ್ ಲಾಯಿಲ, ನ್ಯಾಯವಾದಿ ಕೇಶವ ಗೌಡ, ನ್ಯಾಯವಾದಿ ಶ್ರೀನಿವಾಸ ಗೌಡ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ನವೀನ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್. ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಧನಂಜಯ ರಾವ್ ಹಾಗೂ ಮನೋಹರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರಕ್ಕೆ ವೇಣು ಉತ್ತಪ್ಪ ಭೇಟಿ

Suddi Udaya
error: Content is protected !!