29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಜೂ.15: ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

ಬಳಂಜ: ಸ್ಥಳೀಯ ಬಳಂಜ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈ ಸೌಲಭ್ಯದಿಂದ ನಾಲ್ಕೂರು, ಶಾಂತಿನಗರ, ತೋಟದಪಲ್ಕೆ , ರಾಮನಗರ, ಅಟ್ಲಾಜೆ , ಬಳಂಜ, ಕಟ್ಟಡಬೈಲು, ತೆಂಕಕಾರಂದೂರು, ಆಲಡ್ಕ , ಕಾಪಿನಡ್ಕ , ಗಾಂಧಿನಗರ, ಸೇರಿದಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ನಮ್ಮೂರಿನ ಮಕ್ಕಳ ಶಿಕ್ಷಣದ ಪಯಣಕ್ಕೆ ಅಮೃತ ಸಂಭ್ರಮದ ಕೊಡುಗೆ ಎನ್ನುವ ದ್ಯೇಯದೊಂದಿಗೆ ಆರಂಭವಾಗಿರುವ ಈ ಸೌಲಭ್ಯವನ್ನು ಜೂನ್ 15 2026ನೇ ಸೋಮವಾರ, ಪೂರ್ವಾಹ್ನ 10 ಘಂಟೆಗೆ ಬಳಂಜ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾರವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರ ನಿಧಿಯಿಂದ ನವೀಕರಣಗೊಳಿಸಲಾದ LKG ಕೊಠಡಿಯ ಉದ್ಘಾಟನೆಯೂ ನೆರವೇರಲಿದೆ.
ಅಶ್ವಥ್ ಹೆಗ್ಡೆ ಫೌಂಡೇಶನ್ ಸಂಸ್ಥೆಯು ಈಗಾಗಲೇ ಸುಮಾರು 15 ಲಕ್ಷಕ್ಕೂ ಮಿಕ್ಕಿದ ವೆಚ್ಚದಲ್ಲಿ ಬಳಂಜ ಶಾಲೆಯನ್ನು ವಿಟ್ರಿಫೈಡ್ ಟೈಲ್ಸ್, ಸ್ವಾಗತ ಗೋಪುರ, ಇಂಟರ್ ಲಾಕ್ ಅಳವಡಿಸುವುದರ ಮೂಲಕ ನವೀಕರಣಗೊಳಿಸಿದ್ದಾರೆ. ಇದೀಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಶಾಲಾ ವಾಹನವನ್ನು ಸಮರ್ಪಿಸುತ್ತಿದೆ.
ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸಮಿತಿಯ ಸ್ಥಾಪಕಾಧ್ಯಕ್ಷರಾದ ಕೆ ವಸಂತ್ ಸಾಲ್ಯಾನ್, ಕುಳೆಂಜಿರೋಡಿ ಗುತ್ತುವಿನ ಗಡಿ ಪ್ರಧಾನರಾದ ಅರುಣ ಹೆಗ್ಗಡೆ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಚಂದ್ರ ಶೇಖರ್ ಪಿ ಕೆ , ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನೋಹರ್ ಬಳಂಜ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

.

Related posts

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
error: Content is protected !!