24 C
ಪುತ್ತೂರು, ಬೆಳ್ತಂಗಡಿ
June 15, 2026
Uncategorized

ಬಳಂಜ ಶಾಲೆಗೆ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನ ಸಮರ್ಪಣೆ

ಬಳಂಜ: ಸ್ಥಳೀಯ ಬಳಂಜ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಶಾಲಾ ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಈ ಸೌಲಭ್ಯದಿಂದ ನಾಲ್ಕೂರು, ಶಾಂತಿನಗರ, ತೋಟದಪಲ್ಕೆ , ರಾಮನಗರ, ಅಟ್ಲಾಜೆ , ಬಳಂಜ, ಕಟ್ಟಡಬೈಲು, ತೆಂಕಕಾರಂದೂರು, ಆಲಡ್ಕ , ಕಾಪಿನಡ್ಕ , ಗಾಂಧಿನಗರ, ಸೇರಿದಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ನಮ್ಮೂರಿನ ಮಕ್ಕಳ ಶಿಕ್ಷಣದ ಪಯಣಕ್ಕೆ ಅಮೃತ ಸಂಭ್ರಮದ ಕೊಡುಗೆ ಎನ್ನುವ ದ್ಯೇಯದೊಂದಿಗೆ ಆರಂಭವಾಗಿರುವ ಈ ಸೌಲಭ್ಯವನ್ನು ಜೂನ್ 15 2026ನೇ ಸೋಮವಾರ, ಪೂರ್ವಾಹ್ನ 10 ಘಂಟೆಗೆ ಬಳಂಜ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾರವರು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರ ನಿಧಿಯಿಂದ ನವೀಕರಣಗೊಳಿಸಲಾದ LKG ಕೊಠಡಿಯ ಉದ್ಘಾಟನೆಯೂ ನೆರವೇರಲಿದೆ.
ಅಶ್ವಥ್ ಹೆಗ್ಡೆ ಫೌಂಡೇಶನ್ ಸಂಸ್ಥೆಯು ಈಗಾಗಲೇ ಸುಮಾರು 15 ಲಕ್ಷಕ್ಕೂ ಮಿಕ್ಕಿದ ವೆಚ್ಚದಲ್ಲಿ ಬಳಂಜ ಶಾಲೆಯನ್ನು ವಿಟ್ರಿಫೈಡ್ ಟೈಲ್ಸ್, ಸ್ವಾಗತ ಗೋಪುರ, ಇಂಟರ್ ಲಾಕ್ ಅಳವಡಿಸುವುದರ ಮೂಲಕ ನವೀಕರಣಗೊಳಿಸಿದ್ದಾರೆ. ಇದೀಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಶಾಲಾ ವಾಹನವನ್ನು ಸಮರ್ಪಿಸುತ್ತಿದೆ.
ಈ ಕಾರ್ಯಕ್ರಮದಲ್ಲಿ ಜನಜಾಗೃತಿ ಸಮಿತಿಯ ಸ್ಥಾಪಕಾಧ್ಯಕ್ಷರಾದ ಕೆ ವಸಂತ್ ಸಾಲ್ಯಾನ್, ಕುಳೆಂಜಿರೋಡಿ ಗುತ್ತುವಿನ ಗಡಿ ಪ್ರಧಾನರಾದ ಅರುಣ ಹೆಗ್ಗಡೆ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಚಂದ್ರ ಶೇಖರ್ ಪಿ ಕೆ , ಶಿಕ್ಷಣ ಟ್ರಸ್ಟಿನ ಅಧ್ಯಕ್ಷರಾದ ಮನೋಹರ್ ಬಳಂಜ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

.

Related posts

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
error: Content is protected !!