32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಕಾಂಚನದ ಶ್ರೀ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಶಾಲಾ ಮಂತ್ರಿಮಂಡಲವನ್ನು ದೀಪ ಪ್ರಜ್ವಲಿಸಿ ಉದ್ಘಾಟನೆಗೊಳಿಸಿ, ಮಾತನಾಡಿ ನಾಯಕತ್ವ ಅಂದರೆ ಏನು,ಮಾದರಿ ನಾಯಕನಾಗುವ ಪರಿ ಹೇಗೆ,ದೇಶ ಸೇವೆ ಎಂದರೆ ಏನು, ಮತದಾನದಲ್ಲಿ ಆಯ್ಕೆ ಹೇಗಿರಬೇಕು, ಶಾಲೆಯಲ್ಲಿ ಚುನಾವಣೆಯ ಅಗತ್ಯ,ಶಾಲೆಯಲ್ಲಿ ಮಂತ್ರಿಮಂಡಲದ ಅಗತ್ಯ ಏನು ಮಂತ್ರಿಗಳ ಕಾರ್ಯನಿರ್ವಹಣೆ ಹೇಗೆ,ವಿರೋಧ ಪಕ್ಷದವರ ಕೆಲಸ ಏನು ಎಂಬಿತ್ಯಾದಿ ವಿಚಾರವನ್ನು ವಿದ್ಯಾರ್ಥಿಗಳಿಗೆ ಮಾರ್ಮಿಕವಾಗಿ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿ ಮಂತ್ರಿಗಳ ಜವಾಬ್ದಾರಿ, ಶಾಲೆಯಲ್ಲಿ ಅವರ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಶಾಲಾ ನಾಯಕ ಶ್ರೀವರ್ಚಸ್ ತನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ನೀಡಿ ತನ್ನ ಜವಾಬ್ಧಾರಿಯನ್ನು ಉತ್ತಮವಾಗಿ ನಿರ್ವಹಿಸುವ ಕುರಿತು ಭರವಸೆಯನ್ನು ನೀಡಿದರು. ವಿದ್ಯಾರ್ಥಿನಿಯರಾದ ಭಾರ್ಗವಿ ನಿರೂಪಿಸಿ, ಶ್ರೇಯಾ ರೈ ಸ್ವಾಗತಿಸಿ, ಅನುಜ್ಞ ಅತಿಥಿಗಳ ಕಿರು ಪರಿಚಯ ಮಾಡಿ, ಅರ್ಘ್ಯ ಜೈನ್ ಧನ್ಯವಾದವಿತ್ತರು.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!