August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಪಟ್ರಮೆ: ಸೂರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಪಂಚಾಯತ್ ಸದಸ್ಯ ಶಾಮರಾಜ್ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷೆ ಜ್ಯೋತಿ ಚಿದಾನಂದ, ತಾಯಂದಿರ ಸಮಿತಿಯ ಅಧ್ಯಕ್ಷೆ ರೂಪಲತಾ ರವಿ, ಉಪಾಧ್ಯಕ್ಷೆ ಸುಮಲತಾ ದಿನೇಶ್ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ಮೋಹಿನಿ ಹಾಗೂ ಶ್ವೇತಾ ಸಹಕರಿಸಿದರು.

Related posts

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!