September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಹಸ್ತಾಂತರ ಮತ್ತು ಎಕ್.ಕೆ.ಜಿ ಕೊಠಡಿಯ ಉದ್ಘಾಟನೆಯು ಶಾಸಕ ಹರೀಶ್ ಪೂಂಜರವರು ಜೂ 15ರಂದು ನೆರವೇರಿಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್, ಬಳಂಜ ಪ್ರೌಢಶಾಲಾ ವಿಭಾಗದ ಕಾರ್ಯಾಧ್ಯಕ್ಷರಾದ ಕೆ. ವಸಂತ ಸಾಲಿಯಾನ್, ಶಾಲಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಹಿರಿಯರಾದ ಅರುಣ ಹೆಗ್ಡೆ ಬಳಂಜ, ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥನೆಗೈದರು, ಶಾಲಾ ಮುಖ್ಯ ಶಿಕ್ಷಕ ರಂಗಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಮಲ್ಲಿಕಾರ್ಜುನ ನಿರೂಪಿಸಿದರು. ಶಿಕ್ಷಣ ಟ್ರಸ್ಟ್ ಮತ್ತು ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ನಿಟ್ಟಡೆ: ಕುಂಭಶ್ರೀ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಸಂಕಲ್ಪ-2025’ ಓರಿಯಂಟೇಶನ್

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!