23.8 C
ಪುತ್ತೂರು, ಬೆಳ್ತಂಗಡಿ
July 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ) ಸಂಸ್ಥೆಯಲ್ಲಿ ಜೂ.15ರಂದು ಪ್ರಥಮ ವರ್ಷದ ಡಿ.ಎಡ್. ವಿದ್ಯಾರ್ಥಿಗಳ ತರಗತಿ ಪ್ರಾರಂಭೋತ್ಸವ “ದೀಕ್ಷಾವಿಧಿ” ಕಾರ್ಯಕ್ರಮ ನಡೆಯಿತು.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸೋಮಶೇಖರ ಶೆಟ್ಟಿ ಬಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ“ ಶಿಕ್ಷಕ ವೃತ್ತಿಯು ಪವಿತ್ರ ವೃತ್ತಿಗಳಲ್ಲಿ ಒಂದಾಗಿದೆ. ಶಿಕ್ಷಕರು ಕೇವಲ ಪಾಠ ಮಾಡುವುದಲ್ಲದೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಬೆಳಕು ಚೆಲ್ಲುವವರಾಗಿದ್ದಾರೆ ಮತ್ತು ವೃತ್ತಿಯ ಗೌರವವನ್ನು ಉಳಿಸಿಕೊಳ್ಳಲು ಶಿಕ್ಷಕರು ಪ್ರಾಮಾಣಿಕತೆ, ಸಮಯಪಾಲನೆ, ಶಿಸ್ತು ಮತ್ತು ಕರ್ತವ್ಯವನ್ನು ಕಾಪಾಡಿಕೊಳ್ಳಬೇಕು. ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ನೈತಿಕ ಮೌಲ್ಯಗಳನ್ನು ಪಾಲಿಸಬೇಕು. ಶಿಕ್ಷಕರ ನುಡಿ, ವರ್ತನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ನಿರಂತರ ಅಧ್ಯಯನ, ನೂತನ ಜ್ಞಾನಾರ್ಜನೆ ಮತ್ತು ವೃತ್ತಿಪರ ಕೌಶಲ್ಯಗಳ ಅಭಿವೃದ್ಧಿಯ ಮೂಲಕ ಶಿಕ್ಷಕರು ತಮ್ಮ ವೃತ್ತಿಯ ಗೌರವವನ್ನು ಕಾಪಾಡಿ ಪಾವಿತ್ರ‍್ಯತೆ ಉಳಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ತರಬೇತಿ ಅವಧಿಯಲ್ಲಿ ವಿಷಯ ಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ನಮ್ಮ ಸಂಸ್ಥೆಯು ನಿಮಗೆ ಉತ್ತಮ ತರಬೇತಿ ಹಾಗೂ ಮಾರ್ಗದರ್ಶನವನ್ನು ನೀಡುತ್ತದೆ ಎಂಬ ವಿಶ್ವಾಸವಿದೆ. “ ನೀವು ಆದರ್ಶ ಶಿಕ್ಷಕರಾಗಿ ದೇಶವನ್ನು ಕಟ್ಟುವ ಮತ್ತು ಸಮಾಜಸೇವೆಯನ್ನು ಮಾಡುವ ಅವಕಾಶ ನಿಮ್ಮದಾಗಲಿ ನಿಮ್ಮ ಕನಸುಗಳು ನನಸಾಗಲಿ” ಎಂದು ಶುಭ ಹಾರೈಸಿದರು.

ಕಾಲೇಜಿನ ಉಪನ್ಯಾಸಕ ಮಂಜು ಆರ್ ಮಾತನಾಡಿ ಡಿ.ಎಡ್. ಬೆಳೆದು ಬಂದ ಹಾದಿ, ಕೋರ್ಸ್‌ ನ ಮಹತ್ವ ಅದರ ಸದುಪಯೋಗದ ಬಗ್ಗೆ ತಿಳಿಸಿ ಶಿಕ್ಷಣದ ವ್ಯವಸ್ಥೆಯಲ್ಲಿ ನಾವೆಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು ಇಲ್ಲವಾದಲ್ಲಿ ಕಾಲವೇ ನಮ್ಮನ್ನು ಬದಲಾಯಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಹುಲಿಗೆವ್ವ ಮತ್ತು ತಂಡದವರು ಪ್ರಾರ್ಥಿಸಿ, ಅನ್ವಿತಾ ಸ್ವಾಗತಿಸಿ, ಯಜ್ಞಶ್ರೀ ಅತಿಥಿ ಪರಿಚಯಿಸಿ, ತ್ರಿವೇಣಿ ವಂದಿಸಿ, ಚಿಂಚನ ಕಾರ್ಯಕ್ರಮ ನಿರೂಪಿಸಿದರು.

Related posts

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya
error: Content is protected !!