August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್‌ವೈಎಸ್ ಕಾರ್ಯಕರ್ತ ಶರೀಫ್ ಪರಪ್ಪು ರವರ ಕುಟುಂಬಕ್ಕೆ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ಬೆಳ್ತಂಗಡಿ ಝೋನ್ ವತಿಯಿಂದ ಸಾಂತ್ವನ ಫಂಡ್ 1,17,313 ರೂ.ಗಳನ್ನು ಜೂ 14 ರಂದು ಅವರ ಕುಟುಂಬಕ್ಕೆ ಹಸ್ತಾoತರ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಝೋನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ, ಉಪಾಧ್ಯಕ್ಷ ಅಯ್ಯೂಬ್ ಮಹ್ಳರಿ, ಕೆ.ವೈ ಇಸ್ಮಾಯಿಲ್, ಕಾರ್ಯದರ್ಶಿ ಹಾರಿಸ್ ಕುಕ್ಕುಡಿ, ಸಿದ್ದೀಕ್ ಪರಪ್ಪು ಹಾಗೂ ಸರ್ಕಲ್, ಯುನಿಟ್ ಪ್ರತಿನಿಧಿಗಳು, ಪರಪ್ಪು ಜಮಾಅತ್ ನಾಯಕರು ಉಪಸ್ಥಿತರಿದ್ದರು.

ಸಣ್ಣ ವ್ಯಾಪಾರಿಯಾಗಿದ್ದ ಶರೀಫ್ ಪರಪ್ಪು ಅವರು ಕೆಲ ದಿನಗಳ ಹಿಂದೆ ಅಲ್ಪಕಾಲದ ಆನಾರೋಗ್ಯದಿಂದ ಕೊನೆಯುಸಿರೆಳೆದಿದ್ದರು. ಮನೆಯ ಯಜಮಾನನಾಗಿದ್ದ ಅವರ ಅಕಾಲಿಕ ಅಗಲುವಿಕೆಯಿಂದ ಅವರ ಪತ್ನಿ, ಮಕ್ಕಳು‌ ಹಾಗೂ ಅವರ ಕುಟುಂಬ ಕಂಗಾಲಾಗಿದ್ದರು. ಸಂಘಟನೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ದಕ್ಷತೆಯನ್ನು ಪರಿಗಣಿಸಿ ಅವರ ಕುಟುಂಬದ ಸಂಕಷ್ಟ ಕಾಲದಲ್ಲಿ ಅವರಿಗೆ ಸಾಂತ್ವನ ನೀಡುವ ಮೂಲಕ ಎಸ್‌ವೈಎಸ್ ತನ್ನ ಜವಾಬ್ದಾರಿ ಮೆರೆದಿದೆ.

Related posts

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya
error: Content is protected !!