August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

ಧರ್ಮಸ್ಥಳ: ಕೂಟ ಮಹಾಜಗತ್ತು ಸಾಲಿಗ್ರಾಮ, ಬೆಳ್ತಂಗಡಿ ಅಂಗ ಸಂಸ್ಥೆಯ 28ನೇ ವಾರ್ಷಿಕ ಮಹಾಸಭೆಯು ಧರ್ಮಸ್ಥಳ ಅಜಕೂರಿಯ ಸೂರ್ಯ ಕಮಲ್ ಮಹಲ್‌ನಲ್ಲಿ ಜೂ.13ರಂದು ನಡೆಯಿತು.

ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಕಾರಂತ್ ದೇವಸ್ಥಾನದ ವತಿಯಿಂದ ಶ್ರೀ ಗುರುನರಸಿಂಹ ದೇವರ ಆಶೀರ್ವಾದ ಹಾಗೂ ಗುರುಸಂದೇಶವನ್ನು ನೀಡಿದರು.

ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ್ ಹಂದೆ, ಶ್ರೀ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮದ ಕೋಶಾಧಿಕಾರಿ ಲಕ್ಷ್ಮೀನಾರಾಯಣ ಹೊಳ್ಳ, ಕೂಟ ಮಹಾಜಗತ್ತು ಮಂಗಳೂರು ಅಂಗ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ, ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ ಹೊಳ್ಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಗೀತಾ ವಿ. ರಾವ್ ಹಾಗೂ ಮಹಿಳಾ ವೇದಿಕೆಯ ಕಾರ್ಯದರ್ಶಿ ಸಂತೋಷಿನಿ ಕಾರಂತ್ ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ಅಧ್ಯಕ್ಷ ವಾಸುದೇವ ಸೋಮಯಾಜಿ ವಹಿಸಿದ್ದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೌಕರ ಸಂಘದ ವತಿಯಿಂದ ರಾಜ್ಯಮಟ್ಟದ “ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ” ಪಡೆದ ಶ್ರೀ ರಮೇಶ್ ಮಯ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ವಿದ್ಯಾ ಸೋಮಯಾಜಿ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ವೆಂಕಟ್ರಮಣ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಮಯ್ಯ ವಂದಿಸಿದರು.

Related posts

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya
error: Content is protected !!