29.7 C
ಪುತ್ತೂರು, ಬೆಳ್ತಂಗಡಿ
June 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಉದ್ಘಾಟನಾ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಕಾಂಚನದ ಶ್ರೀ ಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಮೇಶ್ ಮಯ್ಯ ಶಾಲಾ ಮಂತ್ರಿಮಂಡಲವನ್ನು ದೀಪ ಪ್ರಜ್ವಲಿಸಿ ಉದ್ಘಾಟನೆಗೊಳಿಸಿ, ಮಾತನಾಡಿ ನಾಯಕತ್ವ ಅಂದರೆ ಏನು,ಮಾದರಿ ನಾಯಕನಾಗುವ ಪರಿ ಹೇಗೆ,ದೇಶ ಸೇವೆ ಎಂದರೆ ಏನು, ಮತದಾನದಲ್ಲಿ ಆಯ್ಕೆ ಹೇಗಿರಬೇಕು, ಶಾಲೆಯಲ್ಲಿ ಚುನಾವಣೆಯ ಅಗತ್ಯ,ಶಾಲೆಯಲ್ಲಿ ಮಂತ್ರಿಮಂಡಲದ ಅಗತ್ಯ ಏನು ಮಂತ್ರಿಗಳ ಕಾರ್ಯನಿರ್ವಹಣೆ ಹೇಗೆ,ವಿರೋಧ ಪಕ್ಷದವರ ಕೆಲಸ ಏನು ಎಂಬಿತ್ಯಾದಿ ವಿಚಾರವನ್ನು ವಿದ್ಯಾರ್ಥಿಗಳಿಗೆ ಮಾರ್ಮಿಕವಾಗಿ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಆಯ್ಕೆಯಾದ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿ, ಮಾತನಾಡಿ ಮಂತ್ರಿಗಳ ಜವಾಬ್ದಾರಿ, ಶಾಲೆಯಲ್ಲಿ ಅವರ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ಶಾಲಾ ನಾಯಕ ಶ್ರೀವರ್ಚಸ್ ತನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ನೀಡಿ ತನ್ನ ಜವಾಬ್ಧಾರಿಯನ್ನು ಉತ್ತಮವಾಗಿ ನಿರ್ವಹಿಸುವ ಕುರಿತು ಭರವಸೆಯನ್ನು ನೀಡಿದರು. ವಿದ್ಯಾರ್ಥಿನಿಯರಾದ ಭಾರ್ಗವಿ ನಿರೂಪಿಸಿ, ಶ್ರೇಯಾ ರೈ ಸ್ವಾಗತಿಸಿ, ಅನುಜ್ಞ ಅತಿಥಿಗಳ ಕಿರು ಪರಿಚಯ ಮಾಡಿ, ಅರ್ಘ್ಯ ಜೈನ್ ಧನ್ಯವಾದವಿತ್ತರು.

Related posts

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
error: Content is protected !!