
ಬೆಳ್ತಂಗಡಿ: ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೇವೆಯಲ್ಲಿದ್ದ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿ ಜಯಕೀರ್ತಿ ಹೆಚ್ ಬಿ.(47ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ..15 ರಂದು ಕೊನೆಯುಸಿರೆಳೆದಿದ್ದಾರೆ.
ಇವರು ಬೆಳ್ತಂಗಡಿ ತಾಲೂಕಿನ ವಿವಿಧ ಪಂಚಾಯತ್ ಗಳಾದ ನೆರಿಯ, ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ಕಲ್ಮಂಜ ಇಲ್ಲೆಲ್ಲಾ ಪ್ರಭಾರ ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (ಪಿಡಿಒ) ಆಗಿ ಕರ್ತವ್ಯ ಸಲ್ಲಿಸಿದ್ದರು.
ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ
ಆಸ್ಪತ್ರೆಗೆ ದಾಖಲಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.













