25.8 C
ಪುತ್ತೂರು, ಬೆಳ್ತಂಗಡಿ
August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ, ಶ್ರುತಿ ಆರ್ಟ್ಸ್ ಕಾವಳಕಟ್ಟೆ ಇದರ ಆಶ್ರಯದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಶಿಬಿರ ಜೂ.14ರಂದು ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.

ಘಟಕದ ಉಪಾಧ್ಯಕ್ಷ ಹಿರಿಯ ಯಕ್ಷಗಾನ ಕಲಾವಿದ ದಿವಾಕರ ದಾಸ್ ಕಾವಳಕಟ್ಟೆ ಅವರು ಶಿಬಿರವನ್ನು ಉದ್ಘಾಟಿಸಿ, ಮಾತನಾಡಿ, ಯಕ್ಷಗಾನದಲ್ಲಿ ವೇಷ ಭೂಷಣಗಳ ಜತೆ ಬಣ್ಣಗಾರಿಕೆಯು ಪ್ರಮುಖ ಅಂಗವಾಗಿದೆ. ಪಾತ್ರಗಳ ಸ್ವಭಾವ, ವೈಶಿಷ್ಟಕ್ಕೆ ತಕ್ಕಂತೆ ವಿನ್ಯಾಸಗಳನ್ನು ಮುಖದಲ್ಲಿ ಚಿತ್ರಿಸುವುದಾಗಿದೆ. ಎಳವೆಯಲ್ಲಿ ಮುಖವರ್ಣಿಕೆ ಕರಗತಗೊಳಿಸಲು ಇಂತಹ ಶಿಬಿರಗಳು ಸಹಕಾರಿಯಾಗಿದೆ. ಎಂದು ಹೇಳಿದರು. ಘಟಕದ ಅಧ್ಯಕ್ಷ ಹರೀಂದ್ರ ಟಿ.ಪೈ ಅವರು ಮಾತನಾಡಿ, ಕಲಿತ ವಿದ್ಯೆ ಯಾವತ್ತೂ ವ್ಯರ್ಥವಾಗುವುದಿಲ್ಲ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಪಟ್ಲ ಫೌಂಡೇಶನ್ ಮೂಲಕ ಮುಂದಿನ ಪೀಳಿಗೆಗೆ ಯಕ್ಷಗಾನ ಕಲೆಯನ್ನು ಉಳಿಸಿ, ಬೆಳೆಸಲು ಸಹಕಾರಿಯಾಗಿದೆ ಎಂದರು.

ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ ಬುಳೆಕ್ಕಿನಕೋಡಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಶ್ರೀ ಮುರುಘಂದ್ರ ಮಿತ್ರ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಮಹಿಳಾ ಘಟಕದ ಗೌರವಾಧ್ಯಕ್ಷೆ ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ, ಅಧ್ಯಕ್ಷೆ ಶಶಿಕಲಾ ಗೋಪಾಲ ಪೂಜಾರಿ, ಯಕ್ಷಗುರು ಸಾಯಿಸುಮಾ ನಾವಡ ಕಾರಿಂಜ, ಪದಾಧಿಕಾರಿಗಳಾದ ಶೋಭಾ ಶೆಟ್ಟಿ, ಚಂದ್ರಶೇಖರ ಶೆಟ್ಟಿ ವಿನೋದ್, ಸುರೇಶ ಶೆಟ್ಟಿ ಮಜಲೋಡಿ, ಅಜಿತ್ ಶೆಟ್ಟಿ ಕಾರಿಂಜ ಪ್ರ. ಕಾರ್ಯದರ್ಶಿ ಸತೀಶ್ ಆಚಾರ್ಯ ಬೆರ್ಕಳ, ಮತ್ತಿತರರು ಉಪಸ್ಥಿತರಿದ್ದರು. ಯಕ್ಷಗಾನ ಕಲಾವಿದರಾದ ದಿವಾಕರ ದಾಸ್, ಪ್ರಭಾಕರ ಶೆಟ್ಟಿ ತೆಂಕಕಾರAದೂರು, ಶಶಿಧರ ಬಾಚಕೆರೆ, ಸಾಯಿಸುಮಾ ನಾವಡ ಅವರು ಬಣ್ಣಗಾರಿಕೆ ತರಬೇತಿ ನೀಡಿದರು.

Related posts

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!