28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಹಾಲಿಂಗೇಶ್ವರ್ ಶೌರ್ಯ ವಿಪತ್ತು ಘಟಕ, ಗರ್ಡಾಡಿ ವಲಯ ಹಾಗೂ ಸ ಹಿ ಪ್ರಾ ಶಾಲೆ ಪೆರ್ಮುಡ ಸಹಕಾರದೊಂದಿಗೆ ಶಾಲೆಯ ಹೊರಾಂಗಣದಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ವೇಣೂರು ಸಿಎ ಬ್ಯಾಂಕಿನ ಉಪಾಧ್ಯಕ್ಷ ರತ್ನಾಕರ ಬಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲಾ ಹಂತದಲ್ಲೇ ಮಕ್ಕಳಿಗೆ ಸಸಿ ನೆಡುವ ಹಾಗೂ ಪೋಷಿಸುವ ಅಭ್ಯಾಸವನ್ನು ಬೆಳೆಸಿದರೆ ಪರಿಸರ ಸಂರಕ್ಷಣೆಯ ಮಹತ್ವವನ್ನು ಅವರು ಜೀವನಪರ್ಯಂತ ಅಳವಡಿಸಿಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ ಅರಣ್ಯ ನಾಶ ಹಾಗೂ ಹವಾಮಾನ ವೈಪರಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರದ ಬಗ್ಗೆ ಕಾಳಜಿ ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು

ಶೌರ್ಯ ವಿಪತ್ತು ಘಟಕ ಸಂಯೋಜಕರು ಹಾಗೂ ಸ್ವಯಂಸೇವಕರು ಊರಿನವರ ಜೊತೆ ಸೇರಿ ಶಾಲಾ ಹೊರಾಂಗಣ ಸ್ವಚ್ಛತೆ ಹಾಗೂ ವಿವಿಧ ಹಣ್ಣಿನ ಗಿಡ ಗಳನ್ನು ನಾಟಿ ಮಾಡಿದರು

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಯಶೋಧ, ಕೃಷಿ ಮೇಲ್ವಿಚಾರಕ ಕೃಷ್ಣ, ವಲಯ ಒಕ್ಕೂಟದ ಅಧ್ಯಕ್ಷ ವರದರಾಜ ಕುಲಾಲ್, ನಿಟ್ಟಡೆ/ಪೆರ್ಮುಡ ಒಕ್ಕೂಟದ ಅಧ್ಯಕ್ಷ ಕರುಣಾಕರ ಹಾಗೂ ಪ್ರಕಾಶ್ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್, ಶಾಲಾ ಮುಖ್ಯ ಶಿಕ್ಷಕಿ ಅರುಣಾ, ಅರಣ್ಯ ಇಲಾಖೆ ಅಧಿಕಾರಿ ವಸಂತ, ಸೇವಾಪ್ರತಿನಿಧಿ ವನಿತಾ ಹಾಗೂ ಪಿ ಜಯಂತಿ, ಪ್ರಮೀಳಾ, ಶೌರ್ಯ ವಿಪತ್ತು ಘಟಕದ ಎಲ್ಲಾ ಸ್ವಯಂ ಸೇವಕರು ಹಾಗೂ ಸಹಶಿಕ್ಷಕರು, ಒಕ್ಕೂಟದ ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!