29.7 C
ಪುತ್ತೂರು, ಬೆಳ್ತಂಗಡಿ
June 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಮಾದಕ ವಸ್ತುಗಳ ದುಷ್ಪರಿಣಾಮ, ಗಾಂಜಾ ಸೇವನೆಯ ಅಪಾಯ, ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಂಗಪ್ಪ ಡಿ ಜಕ್ಕಣ್ಣನವರ್ ಪೊಲೀಸ್ ಉಪನಿರೀಕ್ಷಕರು ಸಂಚಾರ ಠಾಣೆ ಬೆಳ್ತಂಗಡಿ ಹಾಗೂ ರೇಣುಕಾ ಪೊಲೀಸ್ ಕಾನ್ಸ್ಟೇಬಲ್ ಭಾಗವಹಿಸಿದ್ದರು.

ಅತಿಥಿಗಳು ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮಹತ್ವ, ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆ, ಮಾದಕ ವಸ್ತುಗಳ ದುಷ್ಪರಿಣಾಮಗಳು, ಬಾಲ್ಯ ವಿವಾಹದ ವಿರುದ್ಧ ಇರುವ ಕಾನೂನು ಕ್ರಮಗಳು ಹಾಗೂ ಪೋಕ್ಸೋ ಕಾಯ್ದೆಯ ಪ್ರಮುಖ ಅಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಅವರು ಕರೆ ನೀಡಿದರು.

ಶಿಕ್ಷಕ ಶ್ರೇಯಾಂಸ ಜೈನ್ ನಿರೂಪಿಸಿ, ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಚ್.ಆರ್.ಡಿ. ಕ್ಲಬ್‌ನ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಬೆಳ್ತಂಗಡಿ : ತಿಥಿ ಕಾರ್ಯಕ್ರಮ ಪದಾಥ೯ಕ್ಕೆ ಬಡಿಸಲು ನಾಲ್ಕು ಆಮೆಗಳ ಬೇಟೆ: ನಾಲ್ಕು ಮಂದಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya
error: Content is protected !!